ಬಿಜೆಪಿ ಸದಸ್ಯತಾ ಅಭಿಯಾನ ಚುರುಕುಗೊಳಿಸಿ: ಶಾಸಕ ಪ್ರಭು ಚವ್ಹಾಣ

ಭಾರತೀಯ ಜನತಾ ಪಕ್ಷದಿಂದ ದೇಶಾದ್ಯಂತ ಸದಸ್ಯತಾ ಅಭಿಯಾನ ನಡೆಯುತ್ತಿದ್ದು, ಔರಾದ(ಬಿ) ವಿಧಾನಸಭಾ ಕ್ಷೇತ್ರದಲ್ಲಿಯೂ ಕಾರ್ಯಕರ್ತರು ಮಾಡುತ್ತಿದ್ದು, ಈ ಅಭಿಯಾನ ಇನ್ನಷ್ಟು ಚುರುಕುಗೊಳಿಸಬೇಕೆಂದು ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು ಬಿ.ಚವ್ಹಾಣ ಅವರು ತಿಳಿಸಿದರು.

ಶಾಸಕರು ಸೆ.19ರಂದು ಔರಾದ(ಬಿ) ಪಟ್ಟಣ, ಚಿಂತಾಕಿ, ವಡಗಾಂವ ಹಾಗೂ ಸಂತಪೂರನಲ್ಲಿ ಪ್ರವಾಸ ಕೈಗೊಂಡು ಮಹಾಶಕ್ತಿ ಕೇಂದ್ರಗಳ ಪ್ರಮುಖರು, ಬೂತ್ ಅಧ್ಯಕ್ಷರು ಹಾಗೂ ಪ್ರಮುಖ ಕಾರ್ಯಕರ್ತರೊಂದಿಗೆ ಸಭೆ ನಡೆಸಿ, ದೇಶದ ಅಭಿವೃದ್ಧಿಗ ನಿರಂತರ ಶ್ರಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಬೇಕು. ನನಗಾಗಿ ಕೆಲಸ ಮಾಡಬೇಕು. ದೇಶದ ಹಿತದೃಷ್ಟಿಯಿಂದ ಕಾರ್ಯಕರ್ತರು ಶ್ರದ್ಧೆಯಿಂದ ಕೆಲಸ ಮಾಡಬೇಕು. ಪ್ರತಿ ಮನೆ-ಮನೆಗೆ ಬೇಟಿ ನೀಡಿ ಸದಸ್ಯತಾ ಅಭಿಯಾನ ನಡೆಸಬೇಕೆಂದು ಕಾರ್ಯಕರ್ತರಿಗೆ ತಿಳಿಸಿದರು.

ಪ್ರತಿಯೊಬ್ಬ ಕಾರ್ಯಕರ್ತರು ಗುರಿ ನಿಗದಿಪಡಿಸಿಕೊಂಡು ಕಾರ್ಯಪ್ರವೃತ್ತರಾಗಬೇಕು. ದೇಶದ ಹಿತದೃಷ್ಟಿಯಿಂದ ಮತ್ತು ಕಾರ್ಯಕರ್ತರ ಪಕ್ಷವಾಗಿರುವ ಬಿಜೆಪಿ ಪಕ್ಷವನ್ನು ಇನ್ನಷ್ಟು ಬಲಪಡಿಸಬೇಕೆಂಬ ಸಂಕಲ್ಪದೊAದಿಗೆ ಔರಾದ(ಬಿ) ಕ್ಷೇತ್ರದಿಂದ 1.20 ಲಕ್ಷ ಸದಸ್ಯರನ್ನಾಗಿಸುವ ಗುರಿ ಇಟ್ಟುಕೊಂಡಿದ್ದೇವೆ. ಅತಿ ಹೆಚ್ಚು ಸದಸ್ಯರನ್ನಾಗಿ ಮಾಡುವವರಿಗೆ ನಾನು ವೈಯಕ್ತಿಕವಾಗಿ ಧನಸಹಾಯ ಹಾಗೂ ಸನ್ಮಾನ ಮಾಡುತ್ತಿದ್ದು, ರಾಜ್ಯಾಧ್ಯಕ್ಷರು ಕೂಡ ಸನ್ಮಾನಿಸುವರು. ಹಾಗಾಗಿ ಪ್ರತಿಯೊಬ್ಬ ಕಾರ್ಯಕರ್ತರು ಹುರುಪಿನಿಂದ ಮತ್ತು ಆಸಕ್ತಿಯಿಂದ ಕೆಲಸ ಮಾಡಬೇಕೆಂದು ತಿಳಿಸಿದರು.

ಬಿಜೆಪಿ ಮಂಡಲ ಅಧ್ಯಕ್ಷರಾದ ರಾಮಶೆಟ್ಟಿ ಪನ್ನಾಳೆ, ಪ್ರಧಾನ ಕಾರ್ಯದರ್ಶಿ ಖಂಡೋಬಾ ಕಂಗಟೆ, ಮುಖಂಡರಾದ ವಸಂತ ಬಿರಾದಾರ, ಶಿವಾಜಿರಾವ ಪಾಟೀಲ ಮುಂಗನಾಳ ಸೇರಿದಂತೆ ಬಿಜೆಪಿ ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರಗಳ ಪ್ರಮುಖರು, ಬೂತ್ ಅಧ್ಯಕ್ಷರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

 

ವರದಿ : ರಾಚಯ್ಯ ಸ್ವಾಮಿ