ಬಣಜಿಗ ಕ್ಷೇಮಾಭಿವೃದ್ಧಿ ಸಂಘ ಪ್ರತಿಭಾ ಪುರಸ್ಕಾರ ನೂತನ್ ಸಂಸದ ಜಗದೀಶ್ ಶೆಟ್ಟರಗೆ ಸನ್ಮಾನ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಹೊರವಲಯದಲ್ಲಿದ್ದ ಬಸವ ಗಾರ್ಡನ್‌ನಲ್ಲಿ ಕರ್ನಾಟಕ ಬಣಜಿಗ ಕ್ಷೇಮಾಭಿವೃದ್ಧಿ ಸಂಘವತಿಂದ ಪ್ರತಿಭಾ ಪುರಸ್ಕಾರ ಮತ್ತು ಬೆಳಗಾವಿ ನೂತನವಾಗಿ ಆಯ್ಕೆಯಾದ ಸಂಸದ ಜಗದೀಶ್ ಶೆಟ್ಟರ ಅವರಿಗೆ ಸನ್ಮಾನ ಕಾರ್ಯಕ್ರಮ ಜರಗಿತು.

 

ವೀರಶೈವ ಲಿಂಗಾಯತ ಒಳಪಂಗಡಗಳು ಆಯಾ ಸಮಾಜದ ಪ್ರತಿಭಾವಂತರಿಗೆ ಹಾಗೂ ಸಾಧಕರಿಗೆ ಪ್ರೋತ್ಸಾಹಿಸಲು ಮತ್ತು ಸರ್ಕಾರಿ ಸೌಲಭ್ಯಕ್ಕಾಗಿದ್ದರೂ ಸಹಿತ ಲಿಂಗಾಯತ ಸಮಾಜವನ್ನು ಒಟ್ಟಾಗಿ ತೆಗೆದುಕೊಂಡು ಹೋಗಲು ಇರತ್ತದೆ ಹೊರತು ಮತ್ತೊಂದು ಸಮಾಜದೊಂದಿಗೆ ಸಂಘರ್ಷಕ್ಕಾಗಿ ಅಲ್ಲ ಎಂದು ಮಾಜಿಮುಖ್ಯಮಂತ್ರಿ, ಸಾಂಸಸದ ಜಗದೀಶ ಶೆಟ್ಟರ ಹೇಳಿದರು.

 

ರಾಮದುರ್ಗ ಪಟ್ಟಣದ ಬಸವ ಗಾರ್ಡನ್‌ನಲ್ಲಿ ಕರ್ನಾಟಕ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ತಾಲೂಕಾ ಘಟಕ ಆಯೋಜಿಸಿದ ಕಾರ್ಯಕ್ರಮದಲ್ಲಿ ರಾಜ್ಯದಲ್ಲಿ ಬಣಜಿಗ ಸಮಾಜದ ಎಲ್ಲ ತಾಲೂಕಾ ಘಟಕಗಳು ಕ್ರೀಯಾಶೀಲರಾಗಿ ಕೆಲಸ ಮಾಡುತ್ತಿವೆ ಆದರೆ ರಾಜ್ಯ ಘಟಕದ ಸಂಘಟನೆಯಲ್ಲಿ ಕೊರತೆಯಿದ್ದು ಅದನ್ನು ಶೀಘ್ರದಲ್ಲಿ ಅಂತ್ಯ ಮಾಡಿ ರಾಜ್ಯದಲ್ಲಿ ಮತ್ತೆ ಸಂಘಟನೆ ಚುರುಕುಗೊಳಿಸಲು ಪ್ರಯತ್ನಿಸುವದಾಗಿ ಹೇಳಿದರು.

ಬೆಳಗಾವಿ ಜನ ಹುಬ್ಬಳ್ಳಿಯಿಂದ ಬಂದ ನನಗೆ ಆಶಿರ್ವಾದ ಮಾಡಿದ್ದು ನಿಮ್ಮೆಲ್ಲರ ಪ್ರೀತಿ ವಿಶ್ವಾಸಕ್ಕೆ ಋಣಿಯಾಗಿದ್ದು ದಿ. ಸುರೇಶ ಅಂಗಡಿಯವರ ಕಾರ್ಯಗಳನ್ನು ಪೂರ್ತಿಗೊಳಿಸುವದಾಗಿ ಹೇಳಿದರು. ಧಾರವಾಡ ಬೆಳಗಾವಿ ರೈಲು ಸಂಪರ್ಕ ಕೆಲಸ ಮತ್ತು ಸವದತ್ತಿ ಹಾಗೂ ರಾಮದುರ್ಗಕ್ಕೆ ರೈಲು ಸಂಪರ್ಕ ಕಲ್ಪಿಸಲು ಕೇಂದ್ರ ರೇಲ್ವೆ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಿರುವದಾಗಿ ಹೇಳಿದರು.

 

ಕಾರ್ಯಕ್ರಮ ಉದ್ಘಾಟಿಸಿದ ಸರ್ಕಾರದ ಮುಖ್ಯಸಚೇತಕ ಅಶೋಕ ಪಟ್ಟಣ ಮಾತನಾಡಿ ಲಿಂಗಾಯತ ಒಳ ಪಂಗಡಗಳು ಕೇವಲ ಸಮಾವೇಶ, ಸಭೆ ಸಮಾರಂಭ ಮಾಡದೇ ಸಮಾಜದಲ್ಲಿ ಆರ್ಥಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ಜನರನ್ನು ಗುರ್ತಿಸಿ ಮುಖ್ಯವಾಹಿನಿಗೆ ತರಲು ಶ್ರಮಿಸಿದರೆ ಮಾತ್ರ ಬಸವಣ್ಣನವರ ಸಮ ಸಮಾಜ ನಿರ್ಮಾಣ ಸಾಧ್ಯವೆಂದು ಹೇಳಿದರು.

 

ತಾಲೂಕಾ ಘಟಕದ ಅಧ್ಯಕ್ಷ ಗುರುಸಿದ್ಧಪ್ಪ ಮುತ್ತೂರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಮಹಾದೇವಪ್ಪ ಯಾದವಾಡ, ಮಹಿಳಾ ಘಟಕದ ಅಧ್ಯಕ್ಷೆ ಪ್ರಭಾವರಿ ಪುಠಾಣಿ, ಯುವ ಘಟಕದ ಅಧ್ಯಕ್ಷ ರಾಜು ಬೆಂಬಳಗಿ, ಗೋಕಾಕದ ಹರ್ಷಿತಾ ಸವಣೂರ ಇದ್ದರು.

 

ಮಹೇಶ ದೇಶನೂರ, ಶೇಖರಪ್ಪ ಯಾದವಾಡ, ಬಸವಣ್ಣೆಪ್ಪ ಹುದ್ದಾರ, ಶಶಿಧರ ಮಾಳವಾಡ ಇವರಿಗೆ ಕಾಯಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಯಿತು.

 

ಪ್ರಧಾನಕಾರ್ಯದರ್ಶಿ ಈರಣ್ಣ ಬುಡ್ಡಾಗೋಳ ಸ್ವಾಗತಿಸಿದರು. ಪ್ರೋ. ಎಸ್. ಎಂ. ಸಕ್ರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ದಿವ್ಯಾ ಬಟಕುರ್ಕಿ ನಿರೂಪಿಸಿದರು. ಸಿದ್ದು ಹದ್ಲಿ ವಂದಿಸಿದರು.

 

ವರದಿ-Md ಸೋಹಿಲ್ ಭೈರಕದಾರ ಜೆಕೆ ನ್ಯೂಸ್ ಕನ್ನಡ ರಾಮದುರ್ಗ