ಚಿಕ್ಕೋಡಿ : ಲೋಕಸಭಾ ಸದಸ್ಯರಾದ ಕು ಪ್ರಿಯಾಂಕ ಅವರು ಚಿಕ್ಕೋಡಿ ನಗರದ ಸಂಸದರ ಸಭಾಭವನದಲ್ಲಿ ಆಯೋಜಿಸಲಾಗಿದ್ದ 2025ರ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು ಪಡೆದ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ವಿದ್ಯರ್ಥಿಗಳಿಗೆ ಪ್ರೋತ್ಸಾಹಿಸಿ ಅವರ ಪ್ರತಿಭೆಗಳನ್ನು ಗುರುತಿಸಿ ಅವರ ಮುಂದಿನ ವಿದ್ಯಾ ಅಭ್ಯಾಸಕ್ಕಾಗಿ ಅವರು ಗಳನ್ನು ಗುರುತಿಸಿ ಪ್ರತಿ ವಿಧಾನಸಭಾ ಕ್ಷೇತ್ರದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಅಭಿನಂದನಾ ಸಮಾರಂಭದಲ್ಲಿ ಅವರನ್ನು ಅತ್ಯಂತ ಪ್ರೀತಿ-ಪೂರ್ವಕವಾಗಿ ಸನ್ಮಾನಿಸಿ ಸತ್ಕರಿಸಿದರು.
ಈ ವೇಳೆ ಶಾಸಕರಾದ ಶ್ರೀ ಗಣೇಶ ಹುಕ್ಕೇರಿ, ಬುಡಾ ಅಧ್ಯಕ್ಷ ಶ್ರೀ ಲಕ್ಷ್ಮಣರಾವ್ ಚಿಂಗಳೆ, ಮುಖಂಡರಾದ ಶ್ರೀ ಮಹಾವೀರ ಮೊಹಿತೆ, ಚಿಕ್ಕೋಡಿ ಡಿಡಿಪಿಐ ಶ್ರೀ ಆರ್.ಎಸ್. ಸೀತಾರಾಮು, ಕ್ಷೇತ್ರಶಿಕ್ಷಣಾಧಿಕಾರಿಗಳು, ಮುಖಂಡರು, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.
ವರದಿ : ಸದಾನಂದ ಎಂ