ಬಸವಕಲ್ಯಾಣ ಯುವತಿ ಕೊಲೆ ಪ್ರಕರಣ ಸಚಿವ ಖಂಡ್ರೆ ಭೇಟಿ ಕುಟುಂಬಕ್ಕೆ ಸಾಂತ್ವನ ವೈಯಕ್ತಿಕ ಧನಸಹಾಯ

ಬಸವಕಲ್ಯಾಣ ತಾಲೂಕಿನ ಗುಣತೀರ್ಥವಾಡಿ ಗ್ರಾಮದ ಭಾಗ್ಯಶ್ರೀ ಎಂಬ ಯುವತಿಯ ಕೊಲೆ ಘಟನೆಯು ನಮ್ಮೆಲ್ಲರ ಮನಸ್ಸು ಮಿಡಕಿಸಿದೆ ಎಂದು ಈಶ್ವರ ಖಂಡ್ರೆ ಹೇಳಿದರು,

ಯುವತಿಯ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ  ಸಾಂತ್ವನವನ್ನು ತಿಳಿಸಿ. ಇದು ಅತ್ಯಂತ ಪೈಶಾಚಿಕ ಕೃತ್ಯವಾಗಿದ್ದು ಕು. ಭಾಗ್ಯಶ್ರೀ ಆತ್ಮಕ್ಕೆ ಶಾಂತಿ ಸಿಗಲಿ ಅವಳ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಅವರ ಕುಟುಂಬಸ್ಥರಿಗೆ ನೀಡಲೆಂದು ಪ್ರಾರ್ಥಿಸುತ್ತೇನೆ ಎಂದರು

ಇದೆ ವೇಳೆ ಸಚಿವ ಖಂಡ್ರೆ ಯುವತಿ ಕುಟುಂಬಕ್ಕೆ ವೈಯಕ್ತಿಕವಾಗಿ ಧನ ಸಹಾಯ ಮಾಡಿದರು ಕೂಡಲೇ ಸರ್ಕಾರದ ವತಿಯಿಂದ ಹಚ್ಚಿನ 4 ಲಕ್ಷ ರೂ ಗಳ ಚೆಕ್ ಅನ್ನು ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು ಮುಂದಿನ ಹಂತದಲ್ಲಿ ಇನ್ನು ಹೆಚ್ಚಿನ ಪರಿಹಾರ ಜೊತೆಗೆ ಎಲ್ಲಾ ಅಗತ್ಯ ನೆರವು ನೀಡುವದಾಗಿ ಭರವಸೆ ನೀಡಿದರು,

ಪ್ರಕರಣ ನನ್ನ ಗಮನಕ್ಕೆ ಬಂದ ತಕ್ಷಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಕರೆ ಮಾಡಿ ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಕೊಲೆ ಮಾಡಿರುವ ಆರೋಪಿಗಳನ್ನು ಆದಷ್ಟು ಶೀಘ್ರ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸುವಂತೆ ಸೂಚಿಸಿದ್ದೆನೆ ಎಂದು ಅವರು ತಿಳಿಸಿದರು ಈಗಾಗಲೇ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶ್ವಸಿಯಾಗಿದ್ದು ಆರೋಪಿಗಳಿಗೆ ಕಾನೂನು ಅಡಿಯಲ್ಲಿ ಅತಿ ಕಠಿಣ ಶಿಕ್ಷೆ ಆಗುವ ರೀತಿಯಲ್ಲಿ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.