ಕಾರ್ ಹಾಗೂ ಕಬ್ಬು ಕಟಾವು ಮಷೀನ್ ನಡುವೆ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೆ ಐವರ ಸಾವನ್ನಪ್ಪಿರುವ ಘಟನೆ
ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಬಿಳೆಬಾವಿ ಕ್ರಾಸ್ ಬಳಿ ನಡೆದಿದೆ. ಆಕ್ಸಿಡೆಂಟ್ ರಭಸಕ್ಕೆ ಕಾರಲ್ಲಿದ್ದ ಐವರು ಜನರ ಅಸುನೀಗಿದ್ದಾರೆ.
ಇಬ್ಬರು ಮಹಿಳೆಯರು, 3 ಜನ ಪುರುಷರು ಮೃತಪಟ್ಟಿದ್ದಾರೆ.
ಮೃತರು ವಿಜಯಪುರ ತಾಲೂಕು ಅಲಿಯಾಬಾದ್ ನಿವಾಸಿಗಳು ಎಂದು ತಿಳಿದುಬಂದಿದೆ.
ಹುಣಸಗಿ ಯಿಂದ ತಾಳಿಕೋಟೆಗೆ ಬರುತ್ತಿದ್ದಾಗ ಅವಘಡ ಸಂಭವಿಸಿದೆ.
ಸ್ಥಳಕ್ಕೆ ತಾಳಿಕೋಟೆ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದರು.
ತಾಳಿಕೋಟೆ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ವರದಿ : ಮಹಿಬೂಬ್ ಗುಂತಕಲ್