76ನೇ ಗಣರಾಜ್ಯೋತ್ಸವ ವೇಳೆ ಡಾ ಬಿಆರ್ ಅಂಬೇಡ್ಕರ್ ಭಾವಚಿತ್ರ ಇಡದೇ ಅವಮಾನ PDO, Secretary ಅಮಾನತ್ತು

ತುಮಕೂರು ; ಸರ್ಕಾರದ ಸುತ್ತೋಲೆಯಂತೆ ಜನವರಿ 26ನೇ ದಿನಾಂಕದಂದು ರಾಜ್ಯದ ಸರ್ಕಾರಿ ಕಛೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಸರ್ಕಾರಿ ಶಾಲಾ ಕಾಲೇಜು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ ಎಲ್ಲಾ ಗಣರಾಜೋತ್ಸವ ಸಮಾರಂಭಗಳಲ್ಲಿ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ ಬಿ.ಆರ್ ಅಂಬೇಡ್ಕರ್ ರವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡುವಂತೆ ಸರ್ಕಾರ ಸೂಚಿಸಲಾಗಿತ್ತು..

 

ಆದರೆ ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಕೊಡ್ಲಾಪುರ ಗ್ರಾಮ ಪಂಚಾಯಿತಿಯಲ್ಲಿ ದಿನಾಂಕ : 26/01/2025 ರಂದು ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ರವರ ಭಾವಚಿತ್ರವನ್ನು ಇಡದೇ ಕಾರ್ಯಕ್ರಮ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ .

 

ಸಾಮಾಜಿಕ ಹೋರಾಟಗಾರ ಟೈಗರ್ ನಾಗರಾಜು ದೂರು ನೀಡಿದ ತಕ್ಷಣ ಮಧುಗಿರಿ ತಾಲೂಕು ಆಡಳಿತದ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮಣ್ ಘಟನೆಗೆ ಸಂಬಂಧಿಸಿದಂತೆ ಕ್ರಮ ಕೈಗೊಂಡು ಪರಿಶೀಲಿಸಿ, ಸವಿಸ್ತಾರವಾದ ವರದಿಯನ್ನು ಜಿಲ್ಲಾ ಪಂಚಾಯತ್ ಸಿ ಇ ಓ ಪ್ರಭು ಜಿ ರವರಿಗೆ ಸಲ್ಲಿಸಿದ್ದರು.

 

ಅನುಮತಿ ಪಡೆಯದೇ ಅನಧಿಕೃತವಾಗಿ ಗೈರು ಹಾಜರಾಗಿದ್ದ ಪಿಡಿಓ ನಾಗವೇಣಿ ಜಿ.

 

ಗಣರಾಜ್ಯೋತ್ಸವದ ದಿನದಂದು ಕೊಡ್ಲಾಪುರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾದ ನಾಗವೇಣಿ ಜಿ ಮೇಲಾಧಿಕಾರಿಗಳ ಅನುಮತಿ ಪಡೆಯದೇ ಅನಧಿಕೃತವಾಗಿ ಗೈರು ಹಾಜರಾಗಿ ಹಾಗೂ ಕೇಂದ್ರ ಸ್ಥಾನ ತೊರೆದಿರುವುದು ಇಓ ತನಿಖೆಯಲ್ಲಿ ಬೆಳಕಿಗೆ ಬಂದಿರುತ್ತದೆ. ಪಿಡಿಒ ನಾಗವೇಣಿ ಅವರ ಅನುಪಸ್ಥಿತಿಯಲ್ಲಿ ದಿನಾಂಕ : 26.01.2025 ರಂದು ಭಾನುವಾರ ಬೆಳಿಗ್ಗೆ ಸುಮಾರು 10.30 ರ ಸಮಯದಲ್ಲಿ ಕೋಡಾಪುರ ಗ್ರಾಮ ಪಂಚಾಯಿತಿಯಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಣೆ ಮಾಡಿದ್ದನ್ನು ಮತ್ತು ಡಾ ಬಿ ಆರ್ ಅಂಬೇಡ್ಕರ್ ರವರ ಭಾವಚಿತ್ರವನ್ನು ಇಡದೇ ಸರ್ಕಾರದ ಸುತ್ತೋಲೆಯನ್ನು ಉಲ್ಲಂಘಿಸಿ ಕಾರ್ಯಕ್ರಮದ ಶಿಷ್ಟಾಚಾರ ಉಲ್ಲಂಘನೆಗೆ ಕಾರಣರಾಗಿರುತ್ತಾರೆ.

 

ಸರ್ಕಾರದ ಸುತ್ತೋಲೆಯನ್ನು ಗಾಳಿಗೆ ತೂರಿದ ಪಿಡಿಓ ಸಸ್ಪೆಂಡ್ ಮಾಡುವಂತೆ ಆಗ್ರಹಿಸಿದ್ದ ಸಾಮಾಜಿಕ ಹೋರಾಟಗಾರ ಟೈಗರ್ ನಾಗ್..

 

ಗಣರಾಜ್ಯೋತ್ಸವ ಕಾರ್ಯಕ್ರಮವು ದೇಶದ ಅತ್ಯಂತ ಶ್ರೇಷ್ಠವಾದ ರಾಷ್ಟ್ರೀಯ ಹಬ್ಬವಾಗಿದ್ದು ಕಾರ್ಯಕ್ರಮದ ಶಿಷ್ಟಾಚಾರ ಮತ್ತು ಸರ್ಕಾರದ ನಿರ್ದೇಶನಗಳನ್ನು ಪಾಲಿಸುವುದು ಪ್ರತಿಯೊಬ್ಬ ಸರ್ಕಾರಿ ನೌಕರನ ಜವಾಬ್ದಾರಿಯಾಗಿರುತ್ತದೆ. ಆದರೆ

ಕೊಡ್ಲಾಪುರ ಗ್ರಾಮ ಪಂಚಾಯಿತಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾದ ನಾಗವೇಣಿ ಜಿ ರವರು ಮಹತ್ವದ ರಾಷ್ಟ್ರೀಯ ಹಬ್ಬದ ದಿನದಂದು ಅನಧಿಕೃತವಾಗಿ ಗೈರು ಹಾಜರಾಗಿರುವುದಲ್ಲದೆ ಕೇಂದ್ರ ಸ್ಥಾನವನ್ನು ತೊರೆದು ರಾಷ್ಟ್ರೀಯ ಹಬ್ಬ ಆಚರಣೆಯ ಸಂಬಂಧ ನಿರ್ಲಕ್ಷತೆ ತೋರಿರುವುದಲ್ಲದೆ, ಸದರಿ ಕಾರ್ಯಕ್ರಮಕ್ಕೆ ಗೈರು ಹಾಜರಾದ ಸಂದರ್ಭದಲ್ಲಿ ಸದರಿ ಕಾರ್ಯಕ್ರಮದ ಆಚರಣೆಯ ಶಿಷ್ಟಾಚಾರದ ಸಂಬಂಧ ತಮ್ಮ ಅಧೀನ ನೌಕರರಿಗೆ ಸೂಕ್ತ ಮಾರ್ಗದರ್ಶನ ನೀಡದೇ ಇರುವುದರಿಂದ ತಪ್ಪಿತಸ್ಥರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಡಿ ಎಸ್ ಎಸ್ ರಾಜ್ಯ ಸಂಚಾಲಕ ಹಾಗೂ ಸಾಮಾಜಿಕ ಹೋರಾಟಗಾರ ಟೈಗರ್ ನಾಗರಾಜು ಆಗ್ರಹಿಸಿದ್ದರು..

 

ಪಿಡಿಓ ನಾಗವೇಣಿ ಜಿ ಮತ್ತು ಗ್ರೇಡ್ 2 ಕಾರ್ಯದರ್ಶಿ ವಿನೋದ್ ಕುಮಾರ್ ಸಸ್ಪೆಂಡ್..

 

ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ ಬಿ.ಆರ್ ಅಂಬೇಡ್ಕರ್ ರವರ ಭಾವಚಿತ್ರವನ್ನು ಇಡದೇ ಕಾರ್ಯಕ್ರಮ ನಡೆದಿರುವುದಕ್ಕೆ ಕಾರಣಕರ್ತರಾಗಿ ಕರ್ತವ್ಯ ನಿರ್ಲಕ್ಷತೆ ತೋರಿ, ತೀವ್ರತರವಾದ ಕರ್ತವ್ಯಲೋಪ ಎಸಗಿರುವುದೂ ಕೆಲವು ದಿನ ಪತ್ರಿಕೆ ವರದಿಯಾದ ಬೆನ್ನಲ್ಲೇ ಮತ್ತು ಸಾಮಾಜಿಕ ಹೋರಾಟಗಾರ ಟೈಗರ್ ನಾಗರಾಜು ತಪ್ಪಿತಸ್ಥರನ್ನು ತಕ್ಷಣವೇ ಅಮಾನತ್ತು ಮಾಡಿ ತನಿಖೆ ಮಟ್ಟದಲ್ಲಿ ನಡೆಸಬೇಕೆಂದು ಆಗ್ರಹಿಸಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ ತುಮಕೂರು ಜಿಲ್ಲಾ ಪಂಚಾಯತ್ ಸಿಇಓ ಪ್ರಭು ಜಿ ಕೋಡಾಪುರ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ನಾಗವೇಣಿ ಜಿ ಮತ್ತು ಗ್ರೇಡ್ 2 ಕಾರ್ಯದರ್ಶಿ ವಿನೋದ್ ಕುಮಾರ್ ವಿರುದ್ಧ ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಾವಳಿಗಳು-1957 ರ ನಿಯಮಾವಳಿಗಳನ್ನಯ ಶಿಸ್ತು ಕ್ರಮ ಜರುಗಿಸಲು ತೀರ್ಮಾನಿಸಿ ತಪ್ಪಿತಸ್ಥರ ಮೇಲಿರುವ ಆರೋಪಗಳ ಕುರಿತು ಇಲಾಖಾ ಮಟ್ಟದಲ್ಲಿ ವಿಚಾರಣೆ ಬಾಕಿ ಇರಿಸಿ ಪಿಡಿಒ ನಾಗವೇಣಿ ಜಿ ಮತ್ತು ಗ್ರೇಡ್ 2 ಕಾರ್ಯದರ್ಶಿ ವಿನೋದ್ ಕುಮಾರ್ ಇಬ್ಬರನ್ನು ಸಹ ಅಮಾನತ್ತು ಮಾಡಿ ಆದೇಶ ಹೊರಡಿಸಿದ್ದಾರೆ.

error: Content is protected !!