ಸರಕಾರದ ಯೋಜನೆಗಳಿಗೆ ನೀಡದ ಸಾಲ ಬ್ಯಾಂಕ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಔರಾದ್ : ಕೃಷಿ ಸೇರಿ ವಿವಿಧ ಇಲಾಖೆಗಳಡಿ ಅನುಷ್ಠಾನ ಆಗುವ ಸರಕಾರಿ ಯೋಜನೆಗಳಿಗೆ ಬ್ಯಾಂಕುಗಳು ಸಾಲ ನೀಡುತ್ತಿಲ್ಲ ಎಂದು ತಾಲೂಕು ಯುವ ಕಾಂಗ್ರೆಸ್ ಸಮಿತಿಯ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು. ಪಟ್ಟಣದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಎದುರು ಜಮಾಯಿಸಿದ ಕಾರ್ಯಕರ್ತರು ಬ್ಯಾಂಕ್ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿದರು.

ಈ ವೇಳೆ ಮಾತನಾಡಿದ ಯುವ ಕಾಂಗ್ರೆಸ್ ತಾಲೂಕು ಆದ್ಯಕ್ಷ ಅನಿಲ್ ಬೇಲೂರೆ ಮಾತನಾಡಿ, ಫಲಾನುಭವಿ ಆಧಾರಿತ ಯೋಜನೆಗಳಲ್ಲಿ ಬ್ಯಾಂಕ್‌ಗಳು ಸಾಲ ನೀಡದೆ ಸತಾಯಿಸುತ್ತಿದ್ದಾರೆ. ಸರಕಾರಿ ಯೋಜನೆಗಳಿಗೆ ಕಡ್ಡಾಯವಾಗಿ ಲೋನ್ ನೀಡುವಂತೆ ಜಿಲ್ಲಾಡಳಿತ ಕ್ರಮಕೈಗೊಳ್ಳಲು ಮುಂದಾಬೇಕು ಎಂದು ಒತ್ತಾಯಿಸಿದರು. ಎಸ್ ಬಿಐ ಬ್ಯಾಂಕ್ ಸೇರಿದಂತೆ ಪಟ್ಟಣದ ರಾಷ್ಟ್ರೀಕೃತ ಬ್ಯಾಂಕುಗಳ ಜನರಿಗೆ ಸರಕಾರ ಯೋಜನೆಗಳ ಲೋನ್ ನೀಡುತ್ತಿಲ್ಲ ಎಂದು ದೂರಿದರು.

ಜನರಿಗೆ ಸರಿಯಾಗಿ ದಾಖಲೆಗಳು ತರುವಂತೆ ತಿಳಿಸುತ್ತಾರೆ. ನಂತರ ಎಲ್ಲ ದಾಖಲೆ ಸರಿ ಇದ್ದಾಗಲೂ ಸಾಲ ನೀಡದಿದ್ದರೆ ಹೇಗೆ ? ಈ ಬಗ್ಗೆ ಮೇಲಾಧಿಕಾರಿಗಳು ಮೌನ ವಹಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರೈತರ ಕ್ರಾಪ್ ಲೋನ್, ಮುದ್ರಾ ಲೋನ್, ಕಾರ್ಮಿಕರಿಗೆ ಸಂಬಂಧಿಸಿದ ಲೋನ್ ಸೇರಿದಂತೆ ರಾಜ್ಯ ಮತ್ತು ಕೇಂದ್ರ ಸರಕಾರದ ಯೋಜನೆಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಸಾಲ ನೀಡುತ್ತಿಲ್ಲ ಎಂದು ಕಾರ್ಯಕರ್ತರು ಬ್ಯಾಂಕ್ ವ್ಯವಸ್ಥಾಪಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇನ್ನೂ ಕೆಲವರ ಖಾತೆಗಳಿಗೆ ಸಬ್ಸಿಡಿ ಹಣ ಜಮೆಯಾದರೂ ಲೋನ್ ನೀಡುತ್ತಿಲ್ಲ. ಅರ್ಹ ಫಲಾನುಭವಿಗಳಿಗೆ ಲೋನ್ ನೀಡದಿರುವುದು ಇಲ್ಲಿಯ ಅಧಿಕಾರಿಗಳ ಬೇಜವಾಬ್ದಾರಿತನವೇ ಕಾರಣ ಎಂದರು.

ಕುಡಲೇ ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವ ಅಧಿಕಾರಿಗಳ ವಿರುದ್ಧ ಸಮಗ್ರ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಜಿಲ್ಲಾಧಿಕಾರಿಗಳಿಗೆ ಬರೆದ ಮನವಿಪತ್ರ ತಹಸೀಲ್ದಾರ ಅವರಿಗೆ ಸಲ್ಲಿಸಿದರು. ಪ್ರಮುಖರಾದ ಅನಿಲ್ ನಿರ್ಮಳೆ, ದತ್ತಾತ್ರಿ ಬಾಪೂರೆ, ಚಂದು ಡಿಕೆ, ರಾಜಕುಮಾರ ಮುದಾಳೆ, ಹರಿದೇವ ಸಂಗನಾಳ, ಸಂದೀಪ ಮಾನೆ, ಸಚಿನ‌ ಮೇತ್ರೆ, ಸತೀಶ ಫುಲಾರಿ, ವಿವೇಕ ನಿರ್ಮಳೆ, ರಜನಿಕಾಂತ ದಾಮಾ, ವಿಶಾಲ್ ಸೇರಿದಂತೆ ಅನೇಕರಿದ್ದರು.

ವರದಿ : ರಾಚಯ್ಯ ಸ್ವಾಮಿ

error: Content is protected !!