ಬಸವಾಭಿನಿಗಳು, ಸಾಹಿತಿಗಳು, ಉಪನ್ಯಾಸಕರು, ಸರಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯರು, ಉಪನ್ಯಾಸಕರ ಸಂಘದ ಅಧ್ಯಕ್ಷರು, ಶರಣ ಸಾಹಿತ್ಯ ಪರಿಷತ್ತಿನ ಗೌರವಾಧ್ಯಕ್ಷರಾದ ಮಲ್ಲಿಕಾರ್ಜುನ ಪಾಲಾಮೂರ ರವರಿಗೆ ರಾಜ್ಯಮಟ್ಟದ ಆದರ್ಶ ಬಸವಶ್ರೀ ಪ್ರಶಸ್ತಿ ಲಭಿಸಿದೆ ಎಂದು ಕರ್ನಾಟಕ ರಾಜ್ಯ ಪ್ರಗತಿಪರ ಉಪಾಧ್ಯಾಯರ ಸಂಘದ ರಾಜ್ಯಾಧ್ಯಕ್ಷ ಗುರುಪಾದ ಕೋಗನೂರು ತಿಳಿಸಿದ್ದಾರೆ. ಕಳೆದ 30 ವರ್ಷಗಳಿಂದ ಸಮಾಜಮುಖಿ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು, ಶಿಕ್ಷಣ, ಸಾಹಿತ್ಯ, ಸಂಘಟನೆ, ಸಮಾಜಕಾರ್ಯ, ಜವಾಬ್ದಾರಿಯುತ ಆಡಳಿತ ನಡೆಸುವಲ್ಲಿ ಮಲ್ಲಿಕಾರ್ಜುನ ಪಾಲಾಮೂರ್ ರವರು ತಮ್ಮದೇ ಛಾಪು ಮೂಡಿಸಿದ್ದಾರೆ. ಅವರ ಬಸವತತ್ವ ನಿಷ್ಠೆಯನ್ಬು ಗುರುತಿಸಿ ಪ್ರಶಸ್ತಿ ನೀಡಲಾಗಿದೆ. ಏಪ್ರೀಲ್ 15ರಂದು ಚಿತಾಪೂರದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ರಾಜ್ಯಾಧ್ಯಕ್ಷ ಗುರುಪಾದ ಕೋಗನೂರು, ತಾಲೂಕಾಧ್ಯಕ್ಷ ಜಯಶ್ರೀ ಬಿರಾದಾರ ತಿಳಿಸಿದ್ದಾರೆ.
ವರದಿ : ರಾಜೇಂದ್ರ ಪ್ರಸಾದ್