ರೈತರಿಗೆ ಯಾವುದೇ ರೀತಿಯಿಂದ ಬೀಜ ಹಾಗೂ ಗೊಬ್ಬರ ಕಡಿಮೆಯಾಗದಂತೆ ನೋಡಿಕೊಳ್ಳಿ – ಡಾ ಚಂದ್ರಶೇಖರ ಪಾಟೀಲ್

ಹುಮನಾಬಾದ್ : ಪಟ್ಟಣದ ರೈತ ಸಂಪರ್ಕ ಕೇಂದ್ರದ ಆವರಣದಲ್ಲಿ ಕೃಷಿ ಇಲಾಖೆ ವತಿಯಿಂದ ಸೋಮವಾರ ನಡೆದ 2025-26ನೇ ಸಾಲಿನ ಮುಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆ ಕಾರ್ಯಕ್ರಮ ಉದ್ದೇಶಿಸಿ ವಿಧಾನ ಪರಿಷತ್ ಸದಸ್ಯರಾದ ಡಾ. ಚಂದ್ರಶೇಖರ ಪಾಟೀಲ್ ಅವರು ಮಾತನಾಡುತ್ತಾ ಕಳಪೆ ಮಟ್ಟದ ಬೀಜ ವಿತರಣೆ ಮಾಡದೆ ಪರೀಕ್ಷೆಗೆ ಒಳಪಡಿಸಿದ ಬೀಜಗಳನ್ನು ರೈತರಿಗೆ ವಿತರಿಸಿ.
ಕೃಷಿ ಸಹಾಯಕ ನಿರ್ದೇಶಕರಿಗೆ ಉತ್ತಮ ರೀತಿಯಿಂದ ಕಾರ್ಯನಿರ್ವಹಿಸಿ ರೈತರಿಗೆ ಯಾವುದೇ ರೀತಿಯಿಂದ ಬೀಜ ಹಾಗೂ ಗೊಬ್ಬರ ಕಡಿಮೆಯಾಗದಂತೆ ನೋಡಿಕೊಳ್ಳಿ ಎಂದು ಸೂಚಿಸಿದೆ.

ಈ ಸಂದರ್ಭದಲ್ಲಿ ಶಾಸಕ ಸಿದ್ದು ಪಾಟೀಲ್, ಗ್ರೇಡ್-2 ತಹಸೀಲ್ದಾರ ಗೀತಾ, ಕೃಷಿ ಸಹಾಯಕ ನಿರ್ದೇಶಕರಾದ ಶರಣಕುಮಾರ, ಕೃಷಿ ಸಮಾಜ ಅಧ್ಯಕ್ಷರಾದ ಶ್ರೀ ವಿಶ್ವನಾಥ ಪಾಟೀಲ್ ಮಾಡಗೂಳ, ರೈತ ಸಂಘದ ಅಧ್ಯಕ್ಷರಾದ ಶ್ರೀ ಸತೀಷ ನನ್ನೂರೆ ಸೇರಿ ಅನೇಕರಿದ್ದರು.

error: Content is protected !!