ಬೆಂಗಳೂರು (ತಲಘಟ್ಟಪುರ) : ಪೊಲೀಸ್ ಠಾಣೆಯಲ್ಲಿ ದಿನಾಂಕ:02/05/2025 ರಂದು ಪಿರ್ಯಾದು ದಾರರು ದೂರನ್ನು ಸಲ್ಲಿಸಿರುತ್ತಾರೆ.
ದೂರಿನಲ್ಲಿ ಪಿರಾದುದಾರರು ಸುಂಕದಕಟ್ಟೆಯಲ್ಲಿರುವ ಟೆಲಿಕಾಂ ಲೇಔಟ್ನಲ್ಲಿ ವಾಸವಾಗಿದ್ದು,
ದಿನಾಂಕ:02/05/2025 ರಂದು ಪಿರಾಮದಾರರು ದ್ವಿ-ಚಕ್ರ ವಾಹನದಲ್ಲಿ ತಲಘಟ್ಟಪುರದ ಗಾಣಿಗಾರಪಾಳ್ಯದಲ್ಲಿರುವ ಪರಿಚಯಸ್ತರ ಮನೆಯೊಂದರಲ್ಲಿ ಕಾರ್ಯಕ್ರಮವೊಂದಕ್ಕೆ ಹೋಗಿದ್ದು, ದ್ವಿ-ಚಕ್ರ ವಾಹನವನ್ನು ಗಾಣಿಗಾರಪಾಳ್ಯ, 4ನೇ ಮೈನ್ನಲ್ಲಿ ನಿಲ್ಲಿಸಿದ್ದು, ಮದ್ಯಾಹ್ನ ಕಾರ್ಯಕ್ರಮ ಮುಗಿಸಿ, ವಾಪಸ್ ಬಂದು ನೋಡಲಾಗಿ, ದ್ವಿ-ಚಕ್ರ ವಾಹನವನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುತ್ತಾರೆಂದು ತಿಳಿಸಿರುತ್ತಾರೆ.
ಈ ಕುರಿತು ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ದ್ವಿ-ಚಕ್ರ ವಾಹನ ಕಳವು ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆ ಕೈಗೊಂಡು, ಬಾತ್ಮೀದಾರರಿಂದ ಖಚಿತ ಮಾಹಿತಿಯನ್ನು ಕಲೆ ಹಾಕಿ, ದಿನಾಂಕ:24/05/2025 ರಂದು ಓರ್ವ ವ್ಯಕ್ತಿಯನ್ನು ದ್ವಿ-ಚಕ್ರ ವಾಹನ ಸಮೇತ ವಶಕ್ಕೆ ಪಡೆದುಕೊಳ್ಳಲಾಯಿತು.
ವಶಕ್ಕೆ ಪಡೆದ ವ್ಯಕ್ತಿಯನ್ನು ವಿಚಾರಣೆಗೊಳಪಡಿಸಲಾಗಿ, ಈ ಪ್ರಕರಣದಲ್ಲಿ ದ್ವಿ-ಚಕ್ರ ವಾಹನವನ್ನು ಕಳವು ಮಾಡಿರುವುದಾಗಿ ತಪ್ಪೋಪ್ಪಿಕೊಂಡಿರುತ್ತಾನೆ.
ಈತನು ತಲಘಟ್ಟಪುರ ಪೊಲೀಸ್ ಠಾಣೆಯ ಎಂ. ವ್ಯಕ್ತಿಯಾಗಿರುತ್ತಾನೆ.
ಆರೋಪಿಯನ್ನು ಸುದೀರ್ಘವಾಗಿ ವಿಚಾರಣೆಗೊಳಪಡಿಸಿದಾಗ, ಆರೋಪಿಯು ಇತರೆ 6 ದ್ವಿ-ಚಕ್ರ ವಾಹನಗಳ ಕಳುವು ಮಾಡಿರುವ ಬಗ್ಗೆ ತಿಳಿಸಿರುತ್ತಾನೆ. ಅದೇ ದಿನ ಆರೋಪಿಯು ನೀಡಿದ ಮಾಹಿತಿ ಮೇರೆಗೆ 6 ದ್ವಿ-ಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಯಿತು.
ಈ ಪ್ರಕರಣದ ಆರೋಪಿಯ ಬಂಧನದಿಂದ 1) ತಲಘಟ್ಟಪುರ ಪೊಲೀಸ್ ಠಾಣೆಯ-03 ದ್ವಿ-ಚಕ್ರ ವಾಹನ ಕಳವು ಪ್ರಕರಣಗಳು, 2) ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯ-01 ದ್ವಿ-ಚಕ್ರ ವಾಹನ ಕಳವು ಪ್ರಕರಣ, 3) ಕನಕಪುರ ಪೊಲೀಸ್ ಠಾಣೆಯ-01 ದ್ವಿ-ಚಕ್ರ ವಾಹನ ಕಳವು ಪ್ರಕರಣ, 4) ಹಾರೋಹಳ್ಳಿ ಪೊಲೀಸ್ ಠಾಣೆಯ-01 ದ್ವಿ-ಚಕ್ರ ವಾಹನ ಕಳವು ಪ್ರಕರಣ, 5) ಕಗ್ಗಲೀಪುರ ಪೊಲೀಸ್ ಠಾಣೆಯ-01 ದ್ವಿ-ಚಕ್ರ ವಾಹನ ಕಳವು ಪ್ರಕರಣ ಸೇರಿದಂತೆ ಒಟ್ಟು 7 ದ್ವಿ-ಚಕ್ರ ವಾಹನ ಕಳವು ಪ್ರಕರಣಗಳು ಪತ್ತೆಯಾಗಿರುತ್ತವೆ.
ದಿನಾಂಕ:25/05/2025 ರಂದು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತದೆ.
ಈ ಕಾರ್ಯಾಚರಣೆಯನ್ನು ದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಲೋಕೇಶ್ ಛ ಜಗಲಾಸರ್ ಐ.ಪಿ.ಎಸ್. ರವರ ಮಾರ್ಗದರ್ಶನದಲ್ಲಿ, ಸುಬ್ರಮಣ್ಯಪುರ ಉಪ-ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಗಿರೀಶ್ ಎಸ್.ಬಿ ಕೆ.ಎಸ್.ಪಿ.ಎಸ್. ರವರ ನೇತೃತ್ವದಲ್ಲಿ, ತಲಘಟ್ಟಪುರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಜಗದೀಶ್ ಎನ್ ಮತ್ತು ಅಧಿಕಾರಿ/ಸಿಬ್ಬಂದಿಗಳ ತಂಡ ಪ್ರಕರಣವನ್ನು ಪತ್ತೆಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ.
ವರದಿ : ಮುಬಾರಕ್ ಬೆಂಗಳೂರು