ಮನೆ ಕಳವು ಮಾಡುತ್ತಿದ್ದ ಮೂವರು ವ್ಯಕ್ತಿಗಳ ಬಂಧನ 50ಲಕ್ಷ ಮೌಲ್ಯದ 550 ಗ್ರಾಂ ಚಿನ್ನಾಭರಣ ವಶ

ಹೆಚ್.ಎ.ಎಲ್ ಪೊಲೀಸ್ ಠಾಣಾ ಸರಹದ್ದಿನ, ಎ.ಇ.ಸಿ.ಎಸ್ ಲೇಔಟ್‌ನಲ್ಲಿ ವಾಸವಿರುವ ಪಿರ್ಯಾದುದಾರರು ದಿನಾಂಕ:06/03/2025 ರಂದು ಹೆಚ್.ಎ.ಎಲ್ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿದರು.

ದೂರಿನಲ್ಲಿ ದಿನಾಂಕ:04/03/2025 ರಂದು ಸಂಜೆ ಕುಟುಂಬ ಸಮೇತ ಚೆನ್ನೈಗೆ ಹೋಗಿರುತ್ತಾರೆ. ದಿನಾಂಕ:06/03/2025 ರಂದು ರಾತ್ರಿ ಮನೆಗೆ ವಾಪಸ್ ಬಂದು ನೋಡಿದಾಗ ಯಾರೋ ಕಳ್ಳರು ಮನೆಯ ಕಿಟಕಿಯ ಗ್ರಿಲ್ ಮುರಿದು, ಕೊಠಡಿಯ ಬೀರುವಿನಲ್ಲಿಟ್ಟಿದ್ದ 3 ಲಕ್ಷ ನಗದು ಮತ್ತು ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆಂದು ದೂರು ನೀಡಿದರು.

ಈ ಕುರಿತು ಹೆಚ್.ಎ.ಎಲ್ ಪೊಲೀಸ್ ಠಾಣೆಯಲ್ಲಿ ಕನ್ನ ಕಳವು ಪ್ರಕರಣದ ದಾಖಲಾಗಿರುತ್ತದೆ.

ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು. ಬಾತ್ಮೀಧಾರರಿಂದ ಖಚಿತ ಮಾಹಿತಿಯನ್ನು ಕಲೆ ಹಾಕಿ, ದಿನಾಂಕ:13/05/2025 ರಂದು ಶಿಕಾರಿಪಾಳ್ಯದ ಆಟೋ ನಿಲ್ದಾಣದ ಬಳಿ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಳ್ಳಲಾಯಿತು.

ವಶಕ್ಕೆ ಪಡೆದ ವ್ಯಕ್ತಿಯನ್ನು ವಿಚಾರಣೆಗೊಳಪಡಿಸಲಾಗಿ, ಈ ಪ್ರಕರಣದಲ್ಲಿ ನಗದು ಮತ್ತು ಚಿನ್ನಾಭರಣಗಳನ್ನು ಕಳವು ಮಾಡಿರುವುದಾಗಿ ತಪ್ಪೋಪ್ಪಿಕೊಂಡಿರುತ್ತಾನೆ.

ದಿನಾಂಕ:14/05/2025 ರಂದು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, 10 ದಿನಗಳ ಕಾಲ ಪೊಲೀಸ್ ಅಭಿರಕ್ಷೆಗೆ ಪಡೆದುಕೊಳ್ಳಲಾಯಿತು.

ಪೊಲೀಸ್ ಅಭಿರಕ್ಷೆಗೆ ಪಡೆದ ಆರೋಪಿಯನ್ನು ಸುದೀರ್ಘವಾಗಿ ವಿಚಾರಣೆಗೊಳಪಡಿಸಲಾಗಿ, ಇಬ್ಬರು ಸಹಚರರೊಂದಿಗೆ ಸೇರಿ ಈ ಕೃತ್ಯವೆಸಗಿರುವುದಾಗಿ ಹಾಗೂ ಅವರುಗಳ ಬಗ್ಗೆ ಮಾಹಿತಿಯನ್ನು ನೀಡಿರುತ್ತಾನೆ.

ಅದೇ ದಿನ ತಮಿಳುನಾಡಿನ ತಿರುವಾರೂರ್ ನಲ್ಲಿರುವ ಸಹಚರರಿಬ್ಬರ ವಾಸದ ಮನೆಯಿಂದ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದುಕೊಳ್ಳಲಾಯಿತು.

ವಶಕ್ಕೆ ಪಡೆದ ಸಹಚರರಿಬ್ಬರನ್ನು ವಿಚಾರಣೆಗೊಳಪಡಿಸಲಾಗಿ ಈ ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ತಪ್ರೊಪ್ಪಿಕೊಂಡಿರುತ್ತಾರೆ.

ದಿನಾಂಕ:15/05/2025 ರಂದು ಆರೋಪಿಗಳಿಬ್ಬರನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ. 8 ದಿನಗಳ ಕಾಲ ಪೊಲೀಸ್ ಅಭಿರಕ್ಷೆಗೆ ಪಡೆದುಕೊಳ್ಳಲಾಯಿತು.

ಪೊಲೀಸ್ ಅಭಿರಕ್ಷೆಗೆ ಪಡೆದ ಆರೋಪಿಗಳನ್ನು ಸುದೀರ್ಘವಾಗಿ ವಿಚಾರಣೆಗೊಳಪಡಿಸಿ, ಪ್ರಕರಣದಲ್ಲಿ ಭಾಗಿಯಾಗಿದ್ದ ತಮಿಳುನಾಡಿನ ತಿರುವರೂರ್‌ನಲ್ಲಿ ವಾಸವಿದ್ದ ಸಹಚರನೋರ್ವನ ವಾಸದ ಮನೆಯಿಂದ 278 ಗ್ರಾಂ ಚಿನ್ನಾಭರಣಗಳನ್ನು ಹಾಗೂ ಪ್ರಕರಣದಲ್ಲಿನ ಮತ್ತೋರ್ವ ಸಹಚರನು ತಮಿಳುನಾಡಿನ ಪಾಂಡಿಚೆರಿಯಲ್ಲಿರುವ ಆತನ ಸ್ನೇಹಿತನಿಗೆ ನೀಡಿದ್ದ 172 ಗ್ರಾಂ ಚಿನ್ನಾಭರಣಗಳನ್ನು ಆತನ ವಾಸದ ಮನೆಯಿಂದ ದಿನಾಂಕ:18/05/2025 ರಂದು ವಶಪಡಿಸಿಕೊಳ್ಳಲಾಯಿತು.

ದಿನಾಂಕ:19/05/2025 ರಂದು ಪ್ರಕರಣದಲ್ಲಿ ಭಾಗಿಯಾಗಿದ್ದ ಶಿಕಾರಿಪಾಳ್ಯದ ಆರೋಪಿಯೋರ್ವನ ವಾಸದ ಮನೆಯಿಂದ 100 ಗ್ರಾಂ ಚಿನ್ನದ ಗಟ್ಟಿಯನ್ನು ವಶಪಡಿಸಿಕೊಳ್ಳಲಾಯಿತು.

ಈ ಪ್ರಕರಣದ ಮೂವರು ಆರೋಪಿಗಳ ವಶದಿಂದ ಒಟ್ಟು 550 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಯಿತು. ಇದರ ಮೌಲ್ಯ ₹ 50,00,000/-(ಐವತ್ತು ಲಕ್ಷ ರೂಪಾಯಿ).

ಈ ಪ್ರಕರಣದ ಮೂವರು ಆರೋಪಿಗಳ ಬಂಧನದಿಂದ, ಹೆಚ್.ಎ.ಎಲ್ ಪೊಲೀಸ್ ಠಾಣೆಯ-01 ಮನೆ ಕನ್ನ ಕಳವು ಪ್ರಕರಣ ಪತ್ತೆಯಾಗಿರುತ್ತದೆ.

ದಿನಾಂಕ:20/05/2025 ಆರೋಪಿಗಳಿಬ್ಬರನ್ನು ಮತ್ತು ದಿನಾಂಕ:22/05/2025 ರಂದು ಓರ್ವ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಮೂವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತೆ.

ಈ ಕಾರ್ಯಾಚರಣೆಯನ್ನು ಉಪ ಪೊಲೀಸ್ ಆಯುಕ್ತರು ವೈಟ್ ಫೀಲ್ಡ್ ಡಾ:ಶಿವಕುಮಾರ್ ಗುಣಾರೇ, ಐಪಿಎಸ್ ಸಹಾಯಕ ಪೊಲೀಸ್ ಆಯುಕ್ತರು, ಮಾರತ್ ಹಳ್ಳಿ ಉಪ ವಿಭಾಗ ಪ್ರಿಯದರ್ಶಿನಿ ಈಶ್ವರ್ ಸಾಣೇಕೊಪ್ಪರವರ ಮಾರ್ಗದರ್ಶನದಲ್ಲಿ ಹೆಚ್.ಎ.ಎಲ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಅಜರುದ್ದೀನ್ ಎಂ.ಎಸ್ ಹಾಗೂ ಇತರೆ ಅಧಿಕಾರಿ/ಸಿಬ್ಬಂದಿ ರವರ ತಂಡ ಪ್ರಕರಣವನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿರುತ್ತಾರೆ.

ವರದಿ : ಮುಬಾರಕ್ ಬೆಂಗಳೂರು

error: Content is protected !!