ಬೆಳಗಾವಿ : ಚಿಕ್ಕೋಡಿ ಲೋಕಸಭಾ ಸದಸ್ಯರಾದ ಕು ಪ್ರಿಯಾಂಕಾ ಅಕ್ಕಾ ಜಾರಕಿಹೊಳಿ ಅವರು ಬೆಳಗಾವಿಯಲ್ಲಿ ಮಾಜಿ ಕೇಂದ್ರ ಸಚಿವರು ದಿವಂಗತ ಶ್ರೀ ಬಿ. ಶಂಕರಾನಂದ ಅವರ ಜನ್ಮಶತಮಾನೋತ್ಸವ ಅಂಗವಾಗಿ ಬೆಳಗಾವಿ ನಗರದ ಕ್ಲಬ್ ರಸ್ತೆಗೆ ದಿವಂಗತ ಬಿ. ಶಂಕರಾನಂದ ಮಾರ್ಗ ಎಂದು ಮರು ನಾಮಕರಣ ಮತ್ತು ಅವರ ಪ್ರತಿಮೆ ನಿರ್ಮಾಣಕ್ಕಾಗಿ ಹಮ್ಮಿಕೊಂಡಿದ್ದ ಕಾಮಗಾರಿಯ ಅಡಿಗಲ್ಲು ಸ್ಥಾಪನೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ಮಾಜಿ ಕೇಂದ್ರ ಸಚಿವ, ದಿವಂಗತ ಬಿ. ಶಂಕರಾನಂದ ಅವರು ಏಳು ಬಾರಿ ಸಂಸದರಾಗಿ ಪ್ರತಿನಿಧಿಸಿದ ಚಿಕ್ಕೋಡಿ ಲೋಕಸಭೆ ಕ್ಷೇತ್ರದಿಂದ ಚಿಕ್ಕ ವಯಸ್ಸಿನಲ್ಲಿಯೇ ನಾನು ಸಂಸದೆಯಾಗಿ ಆಯ್ಕೆಯಾಗಿದ್ದು ನನ್ನ ಸೌಭಾಗ್ಯ. ಅವರ ವ್ಯಕ್ತಿತ್ವ ಅವರ ಪರಿಚಯ ಇಂದಿಗೂ ಬೆಳಗಾವಿಯ ಜಿಲ್ಲೆಯ ಹಳ್ಳಿಗಳಿಂದ ದೆಹಲಿಯವರೆಗೂ ಹಚ್ಚಹಸಿರಾಗಿದೆ. ಚಿಕ್ಕೋಡಿ ಲೋಕಸಭೆ ಕ್ಷೇತ್ರವನ್ನು ಇಂದಿಗೂ ಅವರ ಹೆಸರಿನಲ್ಲಿ ದೆಹಲಿಯಲ್ಲಿ ಗುರುತಿಸಲಾಗುತ್ತದೆ
ಈ ಸಂದರ್ಭದಲ್ಲಿ ಬಿ.ಶಂಕರಾನಂದ ಅವರ ಸುಪುತ್ರ ಪ್ರದೀಪ್ ಕಣಗಲಿ, ಪುತ್ರಿ ಚಂದ್ರಮ್ಮ ಕಣಗಲಿ ಹಾಗೂ ಅವರ ಕುಟುಂಬ ಸದಸ್ಯರು, ಮಾಜಿ ರಾಜ್ಯಸಭಾ ಸದಸ್ಯ, ಕೆ.ಎಲ್.ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ, ಮಾಜಿ ಸಂಸದರಾದ ರಮೇಶ ಕತ್ತಿ, ಶಾಸಕರಾದ ಆಸೀಫ್ ಸೇಠ್, ಅಭಯ ಪಾಟೀಲ, ಮಾಜಿ ಶಾಸಕ ಫಿರೋಜ್ ಸೇಠ್ ಅವರು ಸೇರಿ ಅನೇಕರು ಉಪಸ್ಥಿತರಿದ್ದರು.