ಬಾಲಕಾರ್ಮಿಕ ಪದ್ಧತಿ ನಿವಾರಣೆಗಾಗಿ ಜಿಲ್ಲಾಧಿಕಾರಿ ಭೂಬಾಲನ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಟಾಸ್ಕಫೋರ್ಸ ಸಭೆ

ಬಾಲಕಾರ್ಮಿಕ ಪದ್ಧತಿ ನಿವಾರಣೆಗಾಗಿ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಟಾಸ್ಕಫೋರ್ಸ ಸಭೆಯು ಜಿಲ್ಲಾಧಿಕಾರಿಗಳಾದ ಟಿ.ಭೂಬಾಲನ್ ಅವರ ಅಧ್ಯಕ್ಷತೆಯಲ್ಲಿ ಗುರುವಾರ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಜರುಗಿತು.
ಬಾಲಕ ಕಾರ್ಮಿಕರ ರಕ್ಷಣೆಗಾಗಿ ನಿಯಮಿತವಾಗಿ ಪ್ರತಿ ಮಾಹೆವಾರು ವಿವಿಧ ಇಲಾಖೆಗಳ ಜಂಟಿ ಸಹಯೋಗದೊಂದಿಗೆ ಅನಿರೀಕ್ಷಿತ ದಾಳಿ ನಾಡೆಸಿ ಮಕ್ಕಳನ್ನು ನೇಮಿಸಿಕೊಂಡ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸುವಂತೆ ಸಭೆಯಲ್ಲಿ ಸೂಚಿಸಲಾಯಿತು.
ಸಭೆಯಲ್ಲಿ ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಕೆ.ಕೆ.ಚವ್ಹಾಣ, ಜಿಲ್ಲಾ ಕಾರ್ಮಿಕ ಅಧಿಕಾರಿಗಳಾದ ಶ್ರೀಮತಿ ಉಮಾಶ್ರೀ ಕೋಳಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳಾದ ದೀಪಾಕ್ಷಿ ಜಾನಕಿ ಸೇರಿದಂತೆ ಜಿಲ್ಲೆಯ ಎಲ್ಲಾ ಕಾರ್ಮಿಕ ನಿರೀಕ್ಷಕರುಗಳು ಉಪಸ್ಥಿತರಿದ್ದರು.

ವರದಿ : ಅಜೀಜ ಪಠಾಣ

error: Content is protected !!