ರಾಷ್ಟ್ರದಲ್ಲಿ ಕಾಂಗ್ರೆಸ್ ಪಕ್ಷ ನಿಷ್ಠೆಗೆ ಹೆಸರುವಾಸಿಯಾದವರು ಡಾ. ಮಲ್ಲಿಕಾರ್ಜುನ ಖರ್ಗೆರವರು ಅಂದರಂತೆ ಅವರ ಹೆಜ್ಜೆ ಗುರುತಂತೆ
ಕಲ್ಬುರ್ಗಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ನಿಷ್ಠೆಗೆ ಹೆಸರುವಾಸಿ ಡಾ. ಮಲ್ಲಿಕಾರ್ಜುನ ಖರ್ಗೆ ರವರ ಆಪ್ತರಲ್ಲಿ ಪ್ರಮುಖರು, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಜವಾಬ್ದಾರಿಯನ್ನು ಅತ್ಯಂತ ಶ್ರದ್ಧೆ ಹಾಗೂ ಅಭಿವೃದ್ಧಿಪರ ನಿರಂತರ ಸೇವೆಯನ್ನು ಮಾಡುತ್ತಿರುವ ಭೀಮರಾವ ಟಿಟಿ ಅವರನ್ನು ಡಾ ಅಂಬೇಡ್ಕರ್ ನಿಗಮದ ಅಧ್ಯಕ್ಷರನ್ನಾಗಿ ಮಾಡುವಂತೆ ರಘು ದಳಪತಿಯವರು ಉಸ್ತುವಾರಿ ಮಂತ್ರಿಗಳಾದ ಪ್ರಿಯಾಂಕ ಖರ್ಗೆ ಅವರಿಗೆ ಮನವಿಯನ್ನ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಅತ್ಯಂತ ಶ್ರದ್ಧೆ ಹಾಗೂ ಅಭಿವೃದ್ಧಿಪರ ನಿರಂತರ ಸೇವೆಯನ್ನು ಇಂದಿಗೂ ಯಾವುದೇ ಆಸೆ ಅಕ್ಷೆ ಪಡೆದೆ ಸರಳತೆಯಿಂದ ಕಾರ್ಯನಿರ್ವಹಿಸುತ್ತಿದ್ದು, ಜಿಲ್ಲೆಯಲ್ಲಿ ದಲಿತ ಸಮಾಜದ ಹಿರಿಯರು ಹಾಗೂ ಪ್ರಮುಖರು ಇರುವ ಭೀಮರಾವ ಟಿಟಿ ದಶಕಗಳಿಂದ ಕಾಂಗ್ರೆಸ್ ಪಕ್ಷದ ಸಿದ್ಧಾಂತ ನಿಷ್ಠೆಗೆ ಅದರಲ್ಲೂ ಚಿಂಚೋಳಿ ತಾಲೂಕಿಗೆ ಗಣನೀಯ ಸೇವೆಯನ್ನು ನೀಡುತ್ತಾ ಬಂದಿರುವರು, ಹತ್ತು ಹಲವು ಚುನಾವಣೆಗಳಲ್ಲಿ ಅಭ್ಯರ್ಥಿಗಳಿಗೆ ಗೆಲುವು ಸಾಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಹಿರಿಮೆ ಇವರದಾಗಿದೆ. ಮುಂಬರುವಂತಹ ಚುನಾವಣೆಗಳಿಗೆ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಗೆಲುವು ಸಾಧಿಸಲು ಭೀಮ್ ರಾವ್ ಟಿಟಿ ಅವರನ್ನು ಡಾ. ಬಿ ಆರ್. ಅಂಬೇಡ್ಕರ್ ನಿಗಮ ಅಧ್ಯಕ್ಷರನ್ನಾಗಿ ಮಾಡುವಂತೆ ಮನವಿಯನ್ನ ಮಾಡಿದ್ದಾರೆ.
ವರದಿ : ರಾಜೇಂದ್ರ ಪ್ರಸಾದ್