ಟಿ.ಟಿ,ಭೀಮರಾವಗೆ ನಿಗಮ ಮಂಡಳಿಗೆ ಆಯ್ಕೆ ಮಾಡಿ; ಪೂಜಾರಿ

ಕಾಳಗಿ: ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಮಾಜಿ ಜಿಲ್ಲಾ ಪಂಚಾಯತ ಅಧ್ಯಕ್ಷ ಟಿ.ಟಿ,ಭೀಮರಾವ ರವರೆಗೆ ಕರ್ನಾಟಕ ಡಾ.ಬಿ.ಆರ್.ಅಂಬೇಡ್ಕರ್ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಎಂದು ಕಾಳಗಿ ತಾಲೂಕು ಬ್ಲಾಕ್ ಕಾಂಗ್ರೆಸ್ ಒಬಿಸಿ ಅಧ್ಯಕ್ಷ ಜಗನ್ನಾಥ ಪೂಜಾರಿ ಆಗ್ರಹಿಸಿದರು.

ಕಾಳಗಿ ಪಟ್ಟಣದ ಸುದ್ದಿಗಾರರೊಂದಿಗೆ ಮಾತನಾಡಿದರು. ಟಿಟಿ ಭೀಮರಾವ ರವರು, ಕಲಬುರಗಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ನಿಷ್ಠೆಗೆ ಹೆಸರುವಾಸಿಯಾದವರು.
ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಖರ್ಗೆ ರವರ ಆಪ್ತರಲ್ಲಿ ಒಬ್ಬರೆಂದು ಗುರುತಿಸಿಕೊಂಡವರು. ಈ ಹಿಂದೆ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಜನರ ಸೇವೆಸಲ್ಲಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಪಾಳ್ಯಯಲ್ಲಿ ಅತ್ಯಂತ ಶ್ರದ್ಧೆ-ನಿಷ್ಠೆಯನ್ನು ಮೈಗೂಡಿಸಿಕೊಂಡು ಅಧಿಕಾರ ಇರಲಿ ಇರಲಾರದೆ ಇರಲಿ ನೀರಂತವಾಗಿ ಜನಸೇವೇಯೇ ತಮ್ಮ ಧ್ಯೇಯವಾಗಿಸಿಕೊಂಡವರು.
ದಲಿತ ಸಮಾಜದ ಹಿರಿಯ ರಾಜಕಾರಣಿ ಟಿಟಿ ಭೀಮರಾವ ನಾನು ಕಾಂಗ್ರೆಸ್ ಪಕ್ಷದ ಸಿದ್ಧಾಂತ ನಿಷ್ಠೆಗೆ ತಲೆಬಾಗಿ, ಚಿಂಚೋಳಿ ತಾಲೂಕಿಗೆ ಗಣನೀಯ ಸೇವೇ ಸಲ್ಲಿಸುತ್ತಾ, ಹಲವು ಚುನಾವಣೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಗೆಲುವು ತಂದುಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
ಮುಂಬರುವ ಗ್ರಾಮ ಪಂಚಾಯತ್ ಪುರಸಭೆ, ಪಟ್ಟಣದ ಪಂಚಾಯತ, ಜಿಲ್ಲಾ ಪಂಚಾಯತ ಚುನಾವಣೆಗಳಿಗೆ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಗೆಲುವು ಸಾಧಿಸಲು ಟಿ.ಟಿ,ಭೀಮರಾವ ಅವರನ್ನು ಡಾ.ಬಿ.ಆರ್.ಅಂಬೇಡ್ಕರ್ ನಿಗಮ ಅಧ್ಯಕ್ಷರನ್ನಾಗಿ ಮಾಡುವಂತೆ ಒತ್ತಾಯಿಸಿದ್ದಾರೆ.

ವರದಿ : ರಾಜೇಂದ್ರ ಪ್ರಸಾದ್

error: Content is protected !!