ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವತಿಯಿಂದ ಪ್ರಪ್ರಥಮವಾಗಿ ವಿಜಯಪುರ ಕೇಂದ್ರ ಬಸ್ ನಿಲ್ದಾಣದಲ್ಲಿ ಸ್ಥಾಪಿಸಲಾದ ವಿಶೇಷ ಮಾಹಿತಿ ಕೇಂದ್ರವನ್ನು ಶುಕ್ರವಾರ ಜಿಲ್ಲಾಧಿಕಾರಿಗಳಾದ ಟಿ.ಭೂಬಾಲನ್ ಅವರು ಉದ್ಘಾಟಿಸಿದರು.
ಈ ಮಾಹಿತಿ ಕೇಂದ್ರದಲ್ಲಿ ವಿಜಯಪುರ ಜಿಲ್ಲೆ ಮತ್ತು ವಿಜಯಪುರ ಕೇಂದ್ರ ಬಸ್ ನಿಲ್ದಾಣದಿಂದ ಕಾರ್ಯಚರಣೆ ಆಗುವ ಎಲ್ಲಾ ಬಸ್ಸುಗಳ ಮಾಹಿತಿ, ನಿಗಮದಿಂದ ದೊರೆಯುವ ಎಲ್ಲ ಸವಲತ್ತುಗಳ ಕುರಿತು ಪ್ರಯಾಣಿಕರಿಗೆ ಮಾಹಿತಿ ದೊರೆಯಲಿದೆ.
ಈ ಸಂದರ್ಭದಲ್ಲಿ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ, ಸಾರಿಗೆ ಅಧಿಕಾರಿಗಳಾದ ಎಂ ಎಸ್ ಹಿರೇಮಠ್, ಬಸ್ ನಿಲ್ದಾಣದ ವ್ಯವಸ್ಥಾಪಕ ಕೆ.ಕೆ. ಹುಗ್ಗೆನವರ್ ಹಾಗೂ ಇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ವರದಿ : ಅಜೀಜ ಪಠಾಣ.
