ಬೀದರ ಕೋಟೆಯ ಮೇಲೆ ಸೂರ್ಯಕಿರಣ ಏರೋಬ್ಯಾಟಿಕ್ ಟೀಂ. ಆಕರ್ಷಕ ಏರ್ ಶೋ

 

ಬೀದರ.:- ಭಾರತೀಯ ವಾಯುಪಡೆ ಬೀದರನ ಸೂರ್ಯಕಿರಣ ಏರೋಬ್ಯಾಟಿಕ್ ಟೀಂ ‌ನಿಂದ ಬೀದರ ಕೋಟೆಯ ಮೇಲೆ ಶುಕ್ರವಾರ ಆಕರ್ಷಕ ಏರ್ ಶೋ ನಡೆಯಿತು. ಸೂರ್ಯಕಿರಣ ಟೀಂ ಲೀಡರ್ ಗ್ರುಪ್ ಕ್ಯಾಪ್ಟನ್ ಗುರುಪ್ರಿತಸಿಂಗ್ ದಿಲ್ಲೋನ್ ನೇತೃತ್ವದಲ್ಲಿ ನಡೆದ ಏರ್ ಶೋ ಕಾರ್ಯಕ್ರಮದಲ್ಲಿ 9 ಸೂರ್ಯಕಿರಣ ವಿಮಾನಗಳು ವಿವಿಧ ರೀತಿಯಲ್ಲಿ ಆಕರ್ಷಕ ಪ್ರದರ್ಶನ ನೀಡುವ ಮೂಲಕ ನೋಡುಗರನ್ನು ಮಂತ್ರಮುಗ್ದರನ್ನಾಗಿಸಿದವು.

ಸೂರ್ಯಕಿರಣ‌ ವಿಮಾನಗಳು ಆಕಾಶದಲ್ಲಿ ಮೇಲಿನಿಂದ ಕೆಳಗೆ. ಪರಸ್ಪರ ಒಂದಾನೊಂದು ಎದುರಿಗೆ ಕ್ರಾಸಿಂಗ್. ಬ್ಯಾರಲ್ ರೋಲ್. ರಾಷ್ಟ್ರೀ ಧ್ವಜ ಕೇಸರಿ. ಬಿಳಿ. ಹಸಿರು ಬಣ್ಣಗಳು ಹಾಗೂ ಹೃದಯದ ಚಿತ್ರಗಳನ್ನು ಬಿಡುಸುವ ಮೂಲಕ ನೋಡುಗರನ್ನು ಮೂಕವಿಸ್ಮಿತರನ್ನಾಗಿ ಮಾಡುವ ಮೂಲಕ ಆಕಾಶದಲ್ಲಿ ಚಿತ್ತಾರಗಳನ್ನು ಮೂಡಿಸಿದವು. ಕೆಲವೊಂದು ಸಲ ಒಂಟಿಯಾಗಿ. ಜೋಡಿಯಾಗಿ ಮತ್ತು ತಂಡವಾಗಿ ಬರುತ್ತಿದ್ದ ವಿಮಾನಗಳು ಆಕಾಶದಲ್ಲಿ ಯಾವ ದಿಕ್ಕಿನಿಂದ ವಿಮಾನಗಳು ಬರುತ್ತಿವೆ ಎನ್ನುವುದನ್ನು ಜನರು ಕುತೂಹಲದಿಂದ ವೀಕ್ಷಿಸುತ್ತಿದ್ದರು.

1996 ರಲ್ಲಿ ಆರಂಭಿಸಲಾದ ಸೂರ್ಯಕಿರಣ ಏರೋಬ್ಯಾಟಿಕ್ ಟೀಂ ವಿಮಾನಗಳು ಇಲ್ಲಿಯವರೆಗೆ ಭಾರತ ಮಾತ್ರವಲ್ಲದೆ ಶ್ರೀಲಂಕಾ. ಸಿಂಗಾಪುರ್. ದುಬೈ ಸೇರಿದಂತೆ ಇತರೆ ದೇಶಗಳಲ್ಲಿ 600 ಕ್ಕಿಂತಲೂ ಹೆಚ್ಚಿನ ಪ್ರದರ್ಶನಗಳನ್ನು ನೀಡಿದೆ. 9 ವಿಮಾನಗಳ ಈ ಏರಕ್ರಾಪ್ಟ್ ಟೀಂ ಇಡೀ ಏಷ್ಯಾ ಖಂಡದಲ್ಲಿಯೆ ಭಾರತದಲ್ಲಿ ಮಾತ್ರ ಇರುವುದು. ಈ‌ ಲೋಹದ ಹಕ್ಕಿಗಳು ಆಕಾಶದಲ್ಲಿ ಆಕರ್ಷಕ ಪ್ರದರ್ಶನ ನೀಡುವ ಮೂಲಕ ಜನರನ್ನು ಮಂತ್ರಮುಗ್ದರನ್ನಾಗಿಸುತ್ತವೆ.

 

ಆಗಸ್ಟ್. 31 ರಂದು ಶನಿವಾರ ಬೀದರ ಕೋಟೆಯ ಮೇಲೆ ಏರ್ ಶೋ ಕಾರ್ಯಕ್ರಮ ನಡೆಯಲಿದ್ದು. ಬೀದರ ನಗರದ ಎಲ್ಲಾ ಶಾಲಾ- ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಸರಕಾರಿ ನೌಕರರು ಮತ್ತು ‌ಅವರ ಕುಟುಂಬದ ಸದಸ್ಯರಿಗೆ ಈ ಏರ್ ಶೋ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದ್ದು ಅಂದು ಮಧ್ಯಾಹ್ನ 3 ಗಂಟೆಗಳ ಒಳಗೆ ಬೀದರ ಕೋಟೆಯ ಒಳಗಡೆ ನಿಗಧಿತ ಸ್ಥಳದಲ್ಲಿ ಹಾಜರಿದ್ದು ಈ ಏರ್ ಶೋ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ.

ಏರ್ ಶೋ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ‌ಶಿಲ್ಪಾ ಶರ್ಮಾ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ. ಅಪರ‌ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಸೇರಿದಂತೆ ಇತರೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಬೀದರ ‌ನಗರದ ಸಾರ್ವಜನಿಕರು ಕುಟುಂಬ ಸಮೇತವಾಗಿ ಆಗಮಿಸಿ ವೀಕ್ಷಿಸಿದರು.