ಬೃಹತ್ ಉದ್ಯೋಗ ಮೇಳಕ್ಕೆ ಉಪ ಮುಖ್ಯಮಂತ್ರಿಗಳಿಂದ ಚಾಲನೆ

ರಾಮನಗರ, : ಜಿಲ್ಲಾಡಳಿತ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಹಯೋಗದಲ್ಲಿ ಆ. 30ರ ಶುಕ್ರವಾರ ಚನ್ನಪಟ್ಟಣದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ಉದ್ಯೋಗ ಮೇಳಕ್ಕೆ ರಾಜ್ಯದ ಉಪ ಮುಖ್ಯಮಂತ್ರಿಗಳಾದ ಡಿ. ಕೆ. ಶಿವಕುಮಾರ್ ಅವರು ಚಾಲನೆ ನೀಡಿದರು.

 

ಸಾರಿಗೆ, ಮುಜರಾಯಿ ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ ರಾಮಲಿಂಗಾರೆಡ್ಡಿ, ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಚಿವರಾದ ಡಾ. ಶರಣ ಪ್ರಕಾಶ ರುದ್ರಪ್ಪ ಪಾಟೀಲ್, ಶಾಸಕರಾದ ಬಾಲಕೃಷ್ಣ,

ವಿಧಾನ ಪರಿಷತ್ ಶಾಸಕರಾದ ಎಸ್. ರವಿ, ಸುಧಾಮ್ ದಾಸ್, ರಾಮೋಜಿಗೌಡ, ಜಿಲ್ಲಾಧಿಕಾರಿ ಯಶವಂತ್ ವಿ ಗುರುಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿಗ್ವಿಜಯ್ ಬೋಡ್ಕೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಕಾಂತಾ ನಾಯ್ಕ್ ಸೇರಿದಂತೆ ಇತರೆ ಗಣ್ಯರು ವೇದಿಕೆಯಲ್ಲಿದ್ದರು.

 

ವರದಿ : ಗಾಯತ್ರಿ ಒಡೆಯರ್