ಮೀಸಲಾತಿ ಗೊಂದಲವನ್ನು ಆದಷ್ಟು ಬೇಗ ನಿವಾರಿಸಿ ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಈ ಕೂಡಲೇ ಭರ್ತಿ ಮಾಡಿ : ಹಣಮಂತ ನಿರಾಣಿ ಆಗ್ರಹ

ವಿಜಯಪುರ : ಮೀಸಲಾತಿ ಗೊಂದಲವನ್ನು ಆದಷ್ಟು ಬೇಗ ನಿವಾರಿಸಿ ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಈ ಕೂಡಲೇ ಭರ್ತಿ ಮಾಡಬೇಕು ಹಾಗತ ಕೂಡಲೇ ವಯೋಮಿತಿಯನ್ನು ಸಡಿಲಗೊಳಿಸುವಂತೆ ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ ಒತ್ತಾಯಿಸಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಲಿಖಿತ ಪತ್ರ ಬರೆದು ಒತ್ತಾಯಿಸಿರುವ ನಿರಾಣಿ ಅವರು, ಗ್ರಾಮೀಣ ಭಾಗದ ಬಡ ನಿರುದ್ಯೋಗಿಗಳು ಸರ್ಕಾರಿ ನೌಕರಿಯನ್ನು ಪಡೆದುಕೊಳ್ಳಬೇಕೆಂಬ ಮಹದಾಸೆಯೊಂದಿಗೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಸ್ವಂತ ಊರು, ವಯಸ ವಯಸ್ಸಾದ ತಂದೆ-ತಾಯಿ ಹಾಗೂ ಕುಟುಂಬ ವರ್ಗದವರನ್ನು ಬಿಟ್ಟು ದೂರದ ಬೆಂಗಳೂರು, ಧಾರವಾಡ ಹಾಗೂ ವಿಜಯಪುರದಂತಹ ನಗರಗಳಲ್ಲಿ ಸಾಲ ಶೂಲ ಮಾಡಿ ಸುಮಾರು 5-6 ವರ್ಷಗಳಿಂದ ಬಾಡಿಗೆ ಮನೆ, ಪಿಜಿಗಳಲ್ಲಿ ಕಷ್ಟ ಪಟ್ಟು ಹಗಲಿರುಳು ಓದುತ್ತಿದ್ದಾರೆ.
ಅಲ್ಲದೆ ಕಳೆದ ಎರಡು ವರ್ಷಗಳಿಂದ ಒಳ ಮೀಸಲಾತಿ ಜಾರಿ ವಿಳಂಬದಿAದಾಗಿ ಎಲ್ಲ ನೇಮಕಾತಿ ಅಧಿಸೂಚನೆಗಳನ್ನು ತಡೆ ಹಿಡಿದಿರುವುದರಿಂದ ಪಿಜಿ ರೂಮುಗಳ ಬಾಡಿಗೆಯನ್ನು ಕಟ್ಟೋಕು ಆಗದೇ, ಊಟ ಮಾಡುವುದಕ್ಕೂ ಪರದಾಡೋ ಪರಿಸ್ಥಿತಿ ನಿರ್ಮಾಣವಾಗಿದ್ದು ಹೊಸ ನೇಮಕಾತಿಗಳಿಗಾಗಿ ಜಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಇದರಿಂದಾಗಿ ಲಕ್ಷಾಂತರ ಯುವಕರು ತಮ್ಮ ಬದುಕಿನ ಬಗ್ಗೆ ಭರವಸೆಗಳನ್ನು ಕಳೆದುಕೊಳ್ಳುವಂತಾಗಿದೆ ಎಂದು ನಿರಾಣಿ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ವಯೋಮಿತಿ ಮೀರಿ ಸರ್ಕಾರಿ ನೌಕರಿಯಿಂದ ವಂಚಿತರಾಗಿ ಮಾನಸಿಕವಾಗಿ ಕುಗ್ಗುವಂತಾಗಿದೆ. ಅಲ್ಲದೆ ಕಳೆದ ಅಕ್ಟೋಬರ್ ತಿಂಗಳಲ್ಲಿ ಧಾರವಾಡದಲ್ಲಿ 5-6 ವರ್ಷಗಳಿಂದ ಸ್ಪರ್ಧಾತ್ಮಕ ಪರೀಕ್ಷೆಗೆ ಓದುತ್ತಿದ್ದ ಬಡ ಯುವ ಸ್ಪರ್ಧಾಕಾಂಕ್ಷಿಯೊಬ್ಬರು ಮಾನಸಿಕವಾಗಿ ನೊಂದು ಹೃದಯಾಘಾತದಿಂದಾಗಿ ಮೃತ ಪಟ್ಟಿದ್ದು ಅವರ ಪೋಷಕರಿಗೆ ದಿಕ್ಕೇ ತೋಚದಂತಾಗಿ ಚಿಂತಾ ಜನಕವಾಗುವ ಸ್ಥಿತಿ ನಿರ್ಮಾಣವಾಗಿದೆ ಎಂಬ ಅಂಶವನ್ನು ನಿರಾಣಿ ತಮ್ಮ ಪತ್ರದಲ್ಲಿ ಹೇಳಿದ್ದಾರೆ.
ಅಲ್ಲದೆ ಶೇ.56 ರಷ್ಟು ಮೀಸಲಾತಿ ಹಾಗೂ ರೋಸ್ಟರ್ ಬಿಂದು ವಿಚಾರಕ್ಕೆ ಸಂಬAಧಿಸಿದAತ ಪ್ರಕರಣವು ಮಾನ್ಯ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವ ಕಾರಣ ಎಲ್ಲ ನೇಮಕಾತಿಗಳು ನೆನೆಗುದಿಗೆ ಬಿದ್ದು ವಿಳಂಬವಾಗುತ್ತಿದ್ದು. ವಿವಿಧ ಇಲಾಖೆಗಳಲ್ಲಿ ಸಿಬ್ಬಂದಿಗಳ ಕೊರತೆ ಯಿಂದಾಗಿ ಇದರ ನೇರ ಪರಿಣಾಮ ಸರ್ಕಾರದ ಆಡಳಿತದ ಮೇಲೂ ಬೀರುತ್ತಿದೆ.
ಸರ್ಕಾರದ ಈ ನಿರ್ಲಕ್ಷ್ಯ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ಲಕ್ಷಾಂತರ ನಿರುದ್ಯೋಗಿ ಸ್ಪರ್ಧಾರ್ಥಿಗಳು ಕಳೆದ ಸೆಪ್ಟೆಂಬರ್ ನಲ್ಲಿ ರಾಜ್ಯದ ವಿದ್ಯಾಕಾಶಿ ಧಾರವಾಡದಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು. ಅದರ ಮುಂದುವರೆದ ಭಾಗವಾಗಿ ವಿಜಯಪುರದಲ್ಲಿಯೂ ಬೃಹತ್ ಹೋರಾಟ ನಡೆಸಿದೆ, ಎಲ್ಲವನ್ನೂ ಗಂಭೀರವಾಗಿ ಸರ್ಕಾರ ಪರಿಗಣಿಸಿ ನೇಮಕಾತಿ ಪ್ರಕ್ರಿಯೆನ್ನು ಆರಂಭಿಸುವAತೆ ನಿರಾಣಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ವರದಿ : ಅಜೀಜ ಪಠಾಣ.

error: Content is protected !!