ಟಿಎಪಿಸಿಎಂಎಸ್ ಚುನಾವಣೆ; ಅವಿರೋಧ ಆಯ್ಕೆ

ಹುಮನಾಬಾದ್ : ಟಿಎಪಿಸಿಎಂಎಸ್ ಚುನಾವಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಅಭಿಷೇಕ ಪಾಟೀಲ್ ಪೆನಾಲಗೆ ಅವಿರೋಧವಾಗಿ ಆಯ್ಕೆಯಾದ ಹಿನ್ನಲೆಯಲ್ಲಿ ನಗರದ ಮಾಜಿ ಸಚಿವ ರಾಜಶೇಖರ ಪಾಟೀಲ್ ಗೃಹ ಕಚೇರಿಯಲ್ಲಿ ಭಾನುವಾರ ನೂತನ ನಿರ್ದೇಶಕರಿಗೆ ವಿಧಾನ ಪರಿಷತ್ ಸದಸ್ಯ ಡಾ. ಚಂದ್ರಶೇಖರ ಪಾಟೀಲ್ ಸನ್ಮಾನಿಸಿಸಿ ಅಭಿನಂಧಿಸಿದರು.

ಬಳಿಕ ಟಿಎಪಿಸಿಎಂಎಸ್ ಅಧ್ಯಕ್ಷ ಅಭಿಷೇಕ ಪಾಟೀಲ್ ಮಾತನಾಡಿ, ಕಳೆದ ನಾಲ್ಕು ದಶಕಕ್ಕೂ ಹೆಚ್ಚಿನ ಕಾಲದಿಂದ ಕಾಂಗ್ರೆಸ್ ಬೆಂಬಲಿತ ಪ್ರತಿನಿಧಿಗಳೇ ಟಿಎಪಿಸಿಎಂಎಸ್ ನ ಸಂಪೂರ್ಣ ಆಡಳಿತ ವ್ಯವಸ್ಥೆ ನಡೆಸಿಕೊಂಡು ಬರಲಾಗುತ್ತಿದೆ. ಮುಂದಿನ ದಿನಗಳಲ್ಲಿ ರೈತರ ಹಾಗೂ ವ್ಯಾಪಾರಸ್ಥರ ಅಭಿವೃದ್ಧಿಗೆ ಪೂರಕವಾಗಿ ಶ್ರಮ ವಹಿಸಲಾಗುವುದು ಎಂದು ತಿಳಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವೇ ಇದೆ. ಹೀಗಾಗಿ ಸಚಿವರಾದ ಈಶ್ವರ ಖಂಡ್ರೆ, ರಹಿಂಖಾನ್, ಮಾಜಿ ಸಚಿವ ರಾಜಶೇಖರ ಪಾಟೀಲ್ ಹಾಗೂ ವಿಧಾನ ಪರಿಷತ್ ಶಾಸಕರಾದ ಡಾ.‌ ಚಂದ್ರಶೇಖರ ಪಾಟೀಲ್, ಭೀಮರಾವ ಪಾಟೀಲ್ ಅವರ ಮೇಲೆ ಒತ್ತಡ ಹಾಕುವ ಮೂಲಕ ಸರಕಾರದಿಂದ ಅನುದಾನ ತಂದು ಟಿಎಪಿಸಿಎಂಎಸ್ ನ ನೂತನ ಕಚೇರಿ ಹಾಗೂ ಮಳಿಗೆಗಳು ನಿರ್ಮಾಣ ಮಾಡಲಾಗುವುದು ಎಂದು ಭರವಸೆ ನೀಡಿದರು.

ಮಾಜಿ ಸಚಿವ ರಾಜಶೇಖರ ಪಾಟೀಲ್ ಅವರ ಗೃಹ ಕಚೇರಿ ಮುಂಭಾಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ನೂತನ ನಿರ್ದೇಶಕರಿಗೆ ಅದ್ದೂರಿಯಾಗಿ ಸನ್ಮಾನಿಸಿ, ಪರಸ್ಪರ ಸಿಹಿ ವಿನಿಮಯ ಮಾಡಿಕೊಂಡು ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಎಂಎಲ್ಸಿ ಡಾ. ಚಂದ್ರಶೇಖರ ಪಾಟೀಲ್, ಮಲ್ಲಿಕಾರ್ಜುನ್ ಮಾಳಶಟ್ಟಿ, ಅಫ್ಸರಮಿಯ, ಓಂಕಾರ ತುಂಬಾ, ಉಮೇಶ ತುಂಬಾ ಸೇರಿ ಅನೇಕರಿದ್ದರು.

——————————–

13 ಸ್ಥಾನಕ್ಕೆ ಅವಿರೋಧ ಆಯ್ಕೆ

ನ. 22ರಂದು ನಡೆಯಬೇಕಿದ್ದ, ಚುನಾವಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ನ. 14ರಂದು ನಾಮಪತ್ರ ಸಲ್ಲಿಕೆಗೆ ಕೊನೆದಿನವಾಗಿತ್ತು. ಒಟ್ಟು 13 ಸ್ಥಾನಗಳ ಪೈಕಿ 12 ಸ್ಥಾನಕ್ಕೆ ತಲಾ ಒಂದರಂತೆ ನಾಮಪತ್ರ ಸಲ್ಲಿಕೆ ಹಾಗೂ ಹಿಂದುಳಿದ ವರ್ಗ-1 ಸ್ಥಾನಕ್ಕೆ 2 ನಾಮಪತ್ರ ಸಲ್ಲಿಕೆಯಾಗಿದ್ದವು. ನ. 15ರಂದು ನಾಮಪತ್ರ ಪರಿಶಿಲನೆ ನಡೆಸಲಾಗಿತ್ತು. ನ. 16ರಂದು ನಾಮಪತ್ರ ಹಿಂಪಡೆಯಲು ಕೊನೆದಿನವಾಗಿದ್ದು, ಅಂದು ಹಿಂದುಳಿದ ವರ್ಗ 1 ಸ್ಥಾನದ ಇಬ್ಬರೂ ಅಭ್ಯರ್ಥಿ ಪೈಕಿ ಒಬ್ಬರು ನಾಮಪತ್ರ ಹಿಂಪಡೆದ ಹಿನ್ನಲೆ ಅಭಿಷೇಕ ಪಾಟೀಲ್ ಪೆನಾಲಗೆ ಅವಿರೋಧವಾಗಿ ಒಟ್ಟು 13 ನಿರ್ದೇಶಕರ ಸ್ಥಾನಗಳಿಗೆ 13 ಅಭ್ಯರ್ಥಿಗಳಿಗೆ ನೂತನ ನಿರ್ದೇಶಕರಾಗಿ ಆಯ್ಕೆ ಮಾಡಲಾಗಿದೆ ಎಂದು ಚುನಾವಣೆ ಅಧಿಕಾರಿ ಖುದ್ದುಸ್ ತಿಳಿಸಿದ್ದಾರೆ.

error: Content is protected !!