ಬಾಲಕರ ಕಾಟಕ್ಕೆ ಬೇಸತ್ತು 14 ವರ್ಷದ ಇಂಪನಾ ಆತ್ಮಹತ್ಯೆ

ಮಂಡ್ಯ ನಾಲ್ವರು ಯುವಕರಿಂದ ಪ್ರೀತಿ ಪ್ರೇಮದ ಅಪಪ್ರಚಾರ ಹಾಗೂ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಮಂಡ್ಯದ ಹನಕೇರಿ ಗ್ರಾಮದಲ್ಲಿ ಘಟನೆ ನಡೆದಿದೆ ಇಂಪನಾ (14) ಆತ್ಮಹತ್ಯೆ ಮಾಡಿಕೊಂಡವಳು ಗಗನ್ ಸಂಜಯ್ ಮಹಿಂದ್ರ ಹಾಗೂ ಲೂಹಿತ ಎಂಬ ಯುವಕರಿಂದ ಕಿರುಕುಳದ ಆರೋಪ ಕೇಳಿ ಬಂದಿದೆ ಹನಕೇರಿ ಗ್ರಾಮದ ಗಗನ್ ಮತ್ತು ಸ್ನೇಹಿತರ ಸೇರಿ ಇಂಪನ ಮಹೇಂದ್ರ ಎಂಬಾತನನ್ನು ಪ್ರೀತಿ ಮಾಡುತ್ತಿದ್ದಾಳೆ ಎಂದು ಗಾಳಿ ಸುದ್ದಿ ಹಬ್ಬಿಸಿದ್ದರು ಅಲ್ಲದೆ ಆಕೆ ಮಾತಾಡುವುದನ್ನು ರೆಕಾರ್ಡ್ ಮಾಡಿಕೊಂಡು ವೈರಲ್ ಮಾಡಿದರು ಇದರಿಂದ ಬೇಸತ್ತು ಇಂಪನ ಮನೆಯಲ್ಲಿ ಯಾರು ಇಲ್ಲದಿದ್ದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಅದೇ ಗ್ರಾಮದ ಶಾಲೆಯಲ್ಲಿ ಇಂಪನ ಒಂಬತ್ತನೇ ತರಗತಿ ಓದುತ್ತಿದ್ದಳು ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

 

ವರದಿ ಸದಾನಂದ ಎಂ ಎಚ್