ನಾಯಕತ್ವ ಬದಲಾವಣೆ ವಿಚಾರವನ್ನು ರಾಹುಲ್ ಗಾಂಧಿಯವರು ತೀರ್ಮಾನಿಸಬೇಕು. ಅವರು ಏನು ತೀರ್ಮಾನಿಸುತ್ತಾರೋ ಅದಕ್ಕೆ ನಾವು ಬದ್ಧ.
ನಾನು ಈ ಬಗ್ಗೆ ಪಕ್ಷದ ವರಿಷ್ಠರ ಬಳಿ ಮಾತನಾಡಿದ್ದು, ನಾವು ಈ ಬಗ್ಗೆ ತೀರ್ಮಾನಿಸುತ್ತೇವೆ ಎಂದು ಹೇಳಿದ್ದಾರೆ. ಅವರ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಿದ್ದೇವೆ.
ಮಾಧ್ಯಮದವರೇ ನಾಯಕತ್ವ ಬದಲಾವಣೆಯ ಬಗ್ಗೆ ಹೆಚ್ಚಾಗಿ ಚರ್ಚಿಸುತ್ತಿದ್ದಾರೆ. ಇಷ್ಟೊಂದು ಪ್ರಶ್ನೆ ಕೇಳಬೇಕಾದ ಅಗತ್ಯ ಏನಿದೆ? ವಿಧಾನಸಭೆಯಲ್ಲಿ ಈ ಬಗ್ಗೆ ಹೇಳಿದ ಮೇಲೂ ಪುನಃ ಚರ್ಚೆ ಮಾಡುವ ಅಗತ್ಯವೇ ಇಲ್ಲ.
ಕೆ.ಎನ್.ರಾಜಣ್ಣ ಅವರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಮಾಡಿದ್ದು ಎಸ್.ಎಂ.ಕೃಷ್ಣನವರ ಸರ್ಕಾರ. ಅಧಿಕಾರದಲ್ಲಿದ್ದಾಗ ನಾನು ಮಾಡಿದೆ, ಅವರು ಮಾಡಿದರು ಎನ್ನುವುದು ಮುಖ್ಯವಲ್ಲ. ಆದರ ಪ್ರಶ್ನೆಯೇ ಇಲ್ಲ. ಎಸ್.ಎಂ.ಕೃಷ್ಣ ಅವರು ಆಗ ಮುಖ್ಯಮಂತ್ರಿಗಳಿದ್ದರು, ಅವರ ಸರ್ಕಾರ ಮಾಡಿತ್ತು.
ಎಂದು ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಪ್ರತಿಕ್ರಿಯಿಸಿದ್ದಾರೆ.
